ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ

0

                          ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಅ.2 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕೆ ಎಸ್ ಎಸ್ ಕಾಲೇಜ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯ ದೊಂದಿಗೆ ಗಾಂಧಿ ಜಯಂತಿ ಆಚರಣೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಾಡಲಾಯಿತು. 

ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಕಲ್ಲಾಜೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಚ್.ಎಲ್. ವೆಂಕಟೇಶ್, ಗ್ರಾಮ ಪಂಚಾಯತ್ ಸದಸ್ಯರುಗಳು ,ಕೆ ಎಸ್ ಎಸ್ ಕಾಲೇಜ್ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಹಾಗೂ ಸದಸ್ಯರುಗಳು ,ಸಂಜೀವಿನಿ ಸೇವಾ ಟ್ರಸ್ಟ್ ನ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ ,ಪಂಚಾಯತ್ ಕಾರ್ಯದರ್ಶಿ, ಸಂಘಟಕರು ,ಹಾಗೂ ಲಯನ್ಸ್ ಕ್ಲಬ್ಬಿನ ಸದಸ್ಯರುಗಳು ಹಾಜರಿದ್ದರು. ಸುಬ್ರಹ್ಮಣ್ಯ, ಕಾಶಿ ಕಟ್ಟೆಯಿಂದ ಕುಲಕುಂದದವರೆಗೆ ಮಾರ್ಗದ ಮುಖ್ಯರಸ್ತೆಯ ಇಕ್ಕರೆಗಳ್ಳಲ್ಲೂ ಇದ್ದ ಕಸ ಕಡ್ಡಿಗಳನ್ನು ಪ್ಲಾಸ್ಟಿಕ್ ಇನ್ನಿತರ ವಸ್ತುಗಳನ್ನ ಸಂಗ್ರಹಿಸಿ ಸ್ವಚ್ಛತೆಗೊಳಿಸುವುದರೊಂದಿಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.