ಪಂಜ: ಶ್ರೀ ಶಾರದೋತ್ಸವ 2023 ಆಮಂತ್ರಣ ಪತ್ರಿಕೆ ಬಿಡುಗಡೆ

0

ಅ.23 : ಶ್ರೀ ಶಾರದೋತ್ಸವ

ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ, ಶ್ರೀ ಶಾರದೋತ್ಸವ ಸಮಿತಿ-2023ಇದರ ಆಶ್ರಯದಲ್ಲಿ 14ನೇ ವರ್ಷದ ಪಂಜ ಪರಿಸರದ ನಾಡ ಹಬ್ಬ ಶ್ರೀ ಶಾರದೋತ್ಸವವು ಅ.23.ರಂದು ವಿವಿಧ ವೈಧಿಕ, ಧಾರ್ಮಿಕ ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳೊಂದಿಗೆ ಪಂಜ
ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಜರಗಲಿದೆ.
ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅ.5. ರಂದು ನಡೆಯಿತು.


ಪ್ರಗತಿಪರ ಕೃಷಿಕ ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ ‌ಸಂಪ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.
ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಕುಸುಮಾಧರ ಕೆಮ್ಮೂರು ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಭಜನಾ ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ತೋಟ,ಉತ್ಸವ ಸಮಿತಿಯ ಉಪಾಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ, ಕಾರ್ಯದರ್ಶಿ ನಾರಾಯಣ ಶಿರಾಜೆ, ಭಜನಾ ಮಂಡಳಿ ಕೋಶಾಧ್ಯಕ್ಷ ಲೋಕೇಶ್ ಬರೆಮೇಲು, ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ವನಿತಾ ಸಮಾಜ ಅಧ್ಯಕ್ಷೆ ಶ್ರೀಮತಿ.
ಮಾಲಿನಿ ಕುದ್ವ, ಶ್ರೀ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಪವನ್ ಪಲ್ಲತ್ತಡ್ಕ,ಬಿ.ಎಂ. ಎಸ್ ಆಟೋ ರಿಕ್ಷಾ ಚಾಲಕರ ಸಂಘದ ಪೂರ್ವಾಧ್ಯಕ್ಷ ದೇವಪ್ಪ ಏನೆಕಲ್ಲು , ಸ್ಮಾರ್ಟ್ ಟ್ಯೂಷನ್ ಸೆಂಟರ್ ವ್ಯವಸ್ಥಾಪಕ ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಗುರುಪ್ರಸಾದ್ ತೋಟ ಸ್ವಾಗತಿಸಿದರು. ನಾರಾಯಣ ಶಿರಾಜೆ ವಂದಿಸಿದರು.
ಉತ್ಸವ ಕಾರ್ಯಕ್ರಮಗಳ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.