ಅಡ್ಕಾರು: ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ನವರಾತ್ರಿ ಪ್ರಯುಕ್ತ ನಡೆಯುವ ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಅ.6ರಂದು ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ಗೌರವಾಧ್ಯಕ್ಷ ರವಿನ್ ರಾಜ್ ಅಡ್ಕಾರುಪದವು, ಸಮಿತಿಯ ಅಧ್ಯಕ್ಷ ಯತಿಂದ್ರ ಅಡ್ಕಾರು, ಪ್ರದಾನ ಕಾರ್ಯದರ್ಶಿ ಸುಬ್ರಮಣ್ಯ ಪ್ರಸಾದ್ ಅಡ್ಕಾರು, ಕೋಶಾಧಿಕಾರಿ ದಾಮೋದರ ಅಡ್ಕಾರುಬೈಲು, ಗೋಪಾಲ ಕಾನ ಅಡ್ಕಾರು, ಭಾಸ್ಕರ ಅಡ್ಕಾರು ಸೇರಿದಂತೆ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.