ಅಡ್ಡಬೈಲಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ

0

ಶ್ರೀಕೃಷ್ಣ ಭಜನಾ ಮಂಡಳಿ ಅಡ್ಡಬೈಲು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧಾ ಕಾರ್ಯಕ್ರಮ ಅ. 8ರಂದು ಅಡ್ಡಬೈಲಿನಲ್ಲಿ ನಡೆಯುತ್ತಿದೆ.


ಬೆಳಿಗ್ಗೆ ಶ್ರೀಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ದಿವಾಕರ ರೈ ಕೂಜುಗುರಿಯವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಳ್ಪ ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರಿಸಿದರು. ಎನ್.ಎ.ಎಲ್ ನಿವೃತ್ತ ಉದ್ಯೋಗಿ ನೋಂಡಪ್ಪ ನಾಯ್ಕ ಮೋಂಟಿಕುಮೇರು, ಬಳ್ಪ ಗ್ರಾ.ಪಂ. ಸದಸ್ಯ ಚಂದ್ರಶೇಖರ ಅಕ್ಕೇನಿ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಪಲ್ಲತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯಶ್ವಿತ್ ಪಲ್ಲತ್ತಡ್ಕ‌ ಪ್ರಾರ್ಥಿಸಿದರು. ಸಮಿತಿ ಸದಸ್ಯ ಪ್ರಶಾಂತ್ ಪಲ್ಲತ್ತಡ್ಕ ಸ್ವಾಗತಿಸಿ, ಉತ್ಸವ ಸಮಿತಿ ಕಾರ್ಯದರ್ಶಿ ರೋಹಿತ್ ಕೋಡಿಯಡ್ಕ ವಂದಿಸಿದರು. ಬಳ್ಪ ಕೇನ್ಯ ಗ್ರಾಮವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿನೋದ್ ಬೊಳ್ಮಲೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅಂಗನವಾಡಿ ಪುಟಾಣಿಗಳಿಗೆ, ವಿದ್ಯಾರ್ಥಿಗಳಿಗೆ, ಪುರುಷರಿಗೆ ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಕ್ರೀಡಾ ಸ್ಪರ್ಧೆಗಳ ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ.