ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದಿಂದ ಚಾಂದಿನಿಯ ಚಿಕಿತ್ಸೆಗೆ ನೆರವು

0

ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಚಾಂದಿನಿಯವರ ಚಿಕಿತ್ಸೆಗಾಗಿ ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದಿಂದ ಆರ್ಥಿಕ ನೆರವಿನ ಚೆಕ್ಕನ್ನು ಅ. 7ರಂದು ಸಂಘದ ಕಚೇರಿಯಲ್ಲಿ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಜನಾರ್ಧನ್ ಬಿ ಕುರುಂಜಿಭಾಗ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕೋಶಾಧಿಕಾರಿ ಜನಾರ್ಧನ ನಾಯ್ಕ್ ಕೇರ್ಪಳ, ಗೌರವಾಧ್ಯಕ್ಷ ಸೀತಾನಂದ ಬೇರ್ಪಡ್ಕ, ಕ್ರೀಡಾ ಕಾರ್ಯದರ್ಶಿ ರಘುನಾಥ್ ಜಟ್ಟಿಪಳ್ಳ, ಉಪಾಧ್ಯಕ್ಷ ಐತ್ತಪ್ಪ ಎನ್, ಜತೆ ಕಾರ್ಯದರ್ಶಿ ಧರ್ಮಣ್ಣ ನಾಯ್ಕ್ ಗರಡಿ, ಸಂಘಟನಾ ಕಾರ್ಯದರ್ಶಿ ಈಶ್ವರ ವಾರಣಾಶಿ, ಕಾರ್ಯಕಾರಿ ಸಮಿತಿ ಸದಸ್ಯರಾದ ನಿತ್ಯಾನಂದ ಕುಡೆಂಬಿ, ಶ್ರೀಮತಿ ಸುಲೋಚನಾ ನಾರಾಯಣ, ಶ್ರೀಮತಿ ರಾಜೇಶ್ವರಿ ಎಂ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜಾ ಜನಾರ್ಧನ್, ಯುವ ವೇದಿಕೆ ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಉದಯಕುಮಾರ್ ಮಾಣಿಬೆಟ್ಟು ಮತ್ತು ಸಂಘದ ಮೇಲ್ವಿಚಾರಕ ಪುನೀತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.