ಇಂದು ತಡ ರಾತ್ರಿ ದೇವೇಗೌಡ ಸುಬ್ರಹ್ಮಣ್ಯಕ್ಕೆ

0

ಮಾಜಿ ಪ್ರಧಾನಿ ದೇವೇ ಗೌಡ ಅವರು ಇಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆಂದು ತಿಳಿದು ಬಂದಿದೆ.
ಇಂದು ಮಧ್ಯಾಹ್ನ ಆಗಮಿಸುವುದಾಗಿ ಸಿದ್ಧತೆ ಮಾಡಲಾಗಿತ್ತು. ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ಹೆಲಿಕಾಪ್ಟರ್ ಬರಲು ಅನಾನುಕೂಲ ಉಂಟಾದ
ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಕ್ಕೆ ಬಾರದೆ ಪುನಃ ಬೆಂಗಳೂರಿಗೆ ತೆರಳಿತ್ತು. ಇಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನ ಮೂಲಕ ಬಂದು ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.