ಗೂನಡ್ಕ: ಹಟ್ಟಿಯಿಂದ ದನ ಕದ್ದ ಆರೋಪಿಗಳು ಪೊಲೀಸರ ಬಲೆಗೆ

0

ಕಳೆದ ಒಂದು ತಿಂಗಳ ಹಿಂದೆ ಗೂನಡ್ಕ ಪರಿಸರದಿಂದ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಆರೋಪಿಗಳನ್ನು ಸುಳ್ಯ ಪೊಲೀಸರು ಕೇರಳದಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತ ಆರೋಪಿಗಳಲ್ಲಿ ಓರ್ವ ಮರ್ಕಂಜದ ವ್ಯಕ್ತಿ ಮತ್ತೋರ್ವ ಕೇರಳದವ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಸಿಸಿ ಕ್ಯಾಮೆರಾಗಳ ಸಹಾಯದಿಂದ ಸೆರೆ ಹಿಡಿಯಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ಸೆಪ್ಟೆಂಬರ್ 13ರಂದು ತಡರಾತ್ರಿ ಎರಡು ಗಂಟೆ ಹೊತ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೂನಡ್ಕದ ವರದರಾಜ್ ಸಂಕೇಶ್ವರ್ ಮನೆಯ ಹಟ್ಟಿಯಲ್ಲಿದ್ದ ಎರಡು ಹಸುಗಳನ್ನು ಪಿಕಪ್ ಗೆ ತುಂಬಿ ಕದ್ದೊಯ್ಯಲಾಗಿತ್ತು. ಕೇರಳ ಮೂಲದ ಅಬ್ದುಲ್ಲಾ, ಮರ್ಕಂಜದ ಗಣೇಶ್ ಆರೋಪಿಗಳು.
ಇದೀಗ ಆರೋಪಿಗಳನ್ನು ಸುಳ್ಯ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.