ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜು : ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

0

ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇದರ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಕೈಕಂಬ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಉದ್ಘಾಟನೆ ಅ.12 ರಂದು ನಡೆಯಿತು.

ಉಪ್ಪಿನಂಗಡಿ ಸರಕಾರಿ ಪ್ರಥಮ ದೆರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಶಿಬಿರ ಉದ್ಘಾಟಿಸಿದರು.
ಕೈಕಂಬ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವಾರ ಈ ಶಿಬಿರ ನಡೆಯಲಿದೆ.

ಬಿಳಿನೆಲೆ ಗ್ರಾ.ಪಂ.ಅಧ್ಯಕ್ಷೆ ಶಾರದಾ ದಿನೇಶ್ ಧ್ವಜಾರೋಹಣ ನೆರವೇರಿಸಿದರು. ಶಿಬಿರವನ್ನು ಕೈಕಂಬ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಕಳಿಗೆ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್ ವಹಿಸಿದ್ದರು.ಕೈಕಂಬ ಶಾಲಾ ಮುಖ್ಯಗುರು ಪವಿತ್ರ.ಎ, ಗ್ರಾ.ಪಂ.ಸದಸ್ಯೆ ಭವ್ಯಾ ಕುಕ್ಕಾಜೆ, ಬಿಳಿನೆಲೆ ಗ್ರಾಮದ ಗ್ರಾಮ ಲೆಕ್ಕಿಗರಾದ ಶ್ರುತಿ, ಎಸ್‌ಎಸ್‌ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ ಮುಖ್ಯಅತಿಥಿಗಳಾಗಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಸೌಮ್ಯಾ ದಿನೇಶ್, ಭವ್ಯಶ್ರೀ ಹರೀಶ್ ಕುಲ್ಕುಂದ, ಘಟಕದ ನಾಯಕರುಗಳಾದ ಪವನ್ ಮತ್ತು ಕಾವ್ಯ ವೇದಿಕೆಯಲ್ಲಿದ್ದರು.ಸೌಮ್ಯಾ ದಿನೇಶ್ ಸ್ವಾಗತಿಸಿದರು. ಉಪನ್ಯಾಸಕಿ ಸವಿತಾ ಕೈಲಾಸ್ ವಂದಿಸಿದರು.