ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ. 20ರಂದು ಹೊಸ್ತಾರೋಗಣೆ ಕಾರ್ಯಕ್ರಮ ನಡೆಯಿತು.

ದೇವರಿಗೆ ಮಹಾಭಿಷೇಕ ಕದಿರು ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರಾತ:ಕಾಲ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನಡೆದಿದ್ದು ಬಳಿಕ ಕದಿರು ತರಲಾಗಿದ್ದು ಕದಿರು ಪೂಜೆ ನಡೆಯಿತು.

ಭಕ್ತಾದಿಗಳಿಗೆ ನವಾನ್ನ ಭೋಜನ ವ್ಯವಸ್ಥೆ ಗೊಳಿಸಲಾಗಿತ್ತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾl ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಬಾ ಗಿರಿದರ, ವನಜಾ ಭಟ್, ಶ್ರೀ ವತ್ಸ ಬೆಂಗಳೂರು, ಲೋಕೇಶ್ ಮುಂಡೊಕಜೆ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಪೂಜಾ ಕಾರ್ಯಕ್ರಮ ನೆರವೇರಿಸಿದರು.