ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ 5ನೇ ವರ್ಷದ ಶಾರದಾಂಬ ಉತ್ಸವ

0

ಇಂದು ಸಂಜೆ ವೈಭವದ ಶೋಭಾಯಾತ್ರೆ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವವು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಅ.24ರಂದು ಜರುಗಿತು.

ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ಶಾರದಾಂಬ ದೇವಿಯ ವಿಗ್ರಹ ಪ್ರತಿಷ್ಠೆ, ಉಪಹಾರ, ಬಾಲ ಸರಸ್ವತಿ ಹೋಮ, ಅಕ್ಷರಾಭ್ಯಾಸ, ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ಅಧ್ಯಕ್ಷ ಯತೀಂದ್ರ ಅಡ್ಕಾರು , ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ್ ಅಡ್ಕಾರು, ಕೋಶಾಧಿಕಾರಿ ದಾಮೋದರ ಅಡ್ಕಾರು ಸೇರಿದಂತೆ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಇಂದು ಸಂಜೆ ಶ್ರೀ ದೇವಿಯ ವೈಭವದ ಶೋಭಾಯಾತ್ರೆಯು ದೇವಸ್ಥಾನದಿಂದ ಹೊರಟು ವಿನೋಬನಗರದ ತನಕ ಸಾಗಿ ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳ್ಳಲಿದೆ.