ಕಾಯರ್ತೋಡಿ ಶ್ರೀ ಮಹಾವಿಷ್ಣು ದೇಗುಲದಲ್ಲಿ ನವರಾತ್ರಿ ಪ್ರಯುಕ್ತ ಕದಿರು ವಿತರಣೆ – ನವಾನ್ನ ಭೋಜನ

0

ಸುಳ್ಯ ನಗರದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಕದಿರು ವಿತರಣೆ, ನವಾನ್ನ ಭೋಜನ ಕಾರ್ಯಕ್ರಮವು ಅ.24ರಂದು ಜರುಗಿತು.

ಬೆಳಿಗ್ಗೆ ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆ ನಡೆದು, ಭಕ್ತಾದಿಗಳಿಗೆ ಕದಿರು ವಿತರಣೆ ಮಾಡಲಾಯಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ನವಾನ್ನ ಭೋಜನ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.