ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಐಶ್ವರ್ಯ ಪಾರ್ಥಿವ ಶರೀರ ಇಂದು ಸಂಜೆ ಸುಳ್ಯಕ್ಕೆ ಆಗಮನ

0

ಮದುವೆಗದ್ದೆಯಲ್ಲಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ

ಬೆಂಗಳೂರಿನಲ್ಲಿ ನಿನ್ನೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಕನಕಮಜಲು ಕಾಪಿಲದ ಐಶ್ವರ್ಯ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಸುಳ್ಯಕ್ಕೆ ತರಲಾಗುತ್ತಿದ್ದು, ಸಂಜೆ 6 ಗಂಟೆಯ ವೇಳೆಗೆ ಸುಳ್ಯಕ್ಕೆ ತಲುಪಲಿದೆ ಎಂದು ತಿಳಿದು ಬಂದಿದೆ.

ಬಳಿಕ ತಂದೆ ಮನೆಯಾದ ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆಯಲ್ಲಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಐಶ್ವರ್ಯ ಅವರು ಬೆಂಗಳೂರಿನ ತನ್ನ ತಾಯಿ ಮನೆಯಲ್ಲಿ ನಿನ್ನೆ ಅಪರಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.