ಮುರುಳ್ಯ ಹಾಲು ಸೊಸೈಟಿ ನಿರ್ದೇಶಕ ಚೋಮ ಎಣ್ಮೂರು ನಿಧನ

0

ಮುರುಳ್ಯ ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ, ಎಣ್ಮೂರು ಕಾಲನಿ ನಿವಾಸಿ ಚೋಮ ಸಿ. ಯವರು ಅ. ೨೯ ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ೭೫ ವರ್ಷ ವಯಸ್ಸಾಗಿತ್ತು.


ಚೋಮರವರು ಸಾಮಾಜಿಕ ಕಾರ್ಯಕರ್ತರಾಗಿ, ಎಣ್ಮೂರು ದೇವಿನಗರದಲ್ಲಿರುವ ಮಹಮ್ಮಾಯಿ ದೇವಸ್ಥಾನದ ಅಧ್ಯಕ್ಷರಾಗಿ, ಸಕ್ರಿಯ ಸದಸ್ಯರಾಗಿ, ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿಯೂ ಜನಾನುರಾಗಿದ್ದರು.

ಮೃತರು ಪತ್ನಿ ಮಾನಿಗ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಬಂಧು-ಬಳಗ ಕುಟುಂಬಸ್ಥರನ್ನು ಅಗಲಿದ್ದಾರೆ.