ಐವರ್ನಾಡಿನಲ್ಲಿ ಆದಿ ದ್ರಾವಿಡ ಯುವ ವೇದಿಕೆ ವತಿಯಿಂದ ಕ್ರೀಡಾಕೂಟ – ಸನ್ಮಾನ

0

ಆದಿ ದ್ರಾವಿಡ ಯುವ ವೇದಿಕೆ ,ಫ್ರೆಂಡ್ಸ್ ಕೊಯಿಲ ಮತ್ತು ಫ್ರೆಂಡ್ಸ್ ಕುಳ್ಳಂಪಾಡಿ ಐವರ್ನಾಡು ಇದರ ಆಶ್ರಯದಲ್ಲಿ ಕ್ರೀಡಾಕೂಟ ಹಾಗೂ ಸನ್ಮಾನ ಕಾರ್ಯಕ್ರಮವು ಅ.29 ರಂದು ಐವರ್ನಾಡು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.


ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಹಿರಿಯರಾದ ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಐವರ್ನಾಡು ಪ್ರಸನ್ನ ಕ್ಲಿನಿಕ್ ನ ಡಾ.ಗೌರಿಶಂಕರ್ ಮತ್ತು ನಿವೃತ್ತ ಯೋಧ ಬಜಂತಡ್ಕ ಗಣೇಶ್ ರವರನ್ನು ಶಾಸಕಿ ಕು.ಭಾಗೀರಥಿ ಮುರುಳ್ಯರವರು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು.


ಆದಿದ್ರಾವಿಡ ಯುವ ವೇದಿಕೆ ಅಧ್ಯಕ್ಷ ರಾಮಚಂದ್ರ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಜಬಳೆ, ಸುಜಾತ ಪವಿತ್ರಮಜಲು, ಆದಿ ದ್ರಾವಿಡ ಯುವವೇದಿಕೆ ಅಧ್ಯಕ್ಷ ಮೋನಪ್ಪ ಮಡಿವಾಳಮೂಲೆ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ನಾವೂರು ಉಪಸ್ಥಿತರಿದ್ದರು.