ನ.20 ರಂದು‌ ಉಬರಡ್ಕದಲ್ಲಿ ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನೆ : ಪೂರ್ವಭಾವಿ ಸಭೆ

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕದಲ್ಲಿ ನ.20 ರಂದು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನಡೆಯುವ ಸೌಜನ್ಯಳ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆಯ ಪೂರ್ವಭಾವಿ ಸಭೆಯು ಅ.29 ರಂದು ಉಬರಡ್ಕ ಶ್ರೀ ನರಸಿಂಹ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಮಾತನಾಡಿ ಗೌಡರ ಸಂಘದಿಂದ ಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಸುರೇಶ್ ಅಮೈ, ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ, ಸದಸ್ಯೆ ಶ್ರೀಮತಿ ಭವಾನಿ ಮೂರ್ಜೆ, ಪ್ರತಿಭಟನಾ ಸಭೆಯ ಅಧ್ಯಕ್ಷ ಶೇಷಪ್ಪ ಗೌಡ, ಮಿತ್ತೂರು ಉಳ್ಳಾಕುಲು ದೇವಸ್ಥಾನದ ಆಡಳಿತ ಮೊಕ್ತೇಸರ ‌ವೆಂಕಟ್ರಮಣ ಕೆದಂಬಾಡಿ, ರವಿರಾಜ್ ಭಟ್ ಕಂಬಳಿಮೂಲೆ ಮೊದಲಾದವರು ಉಪಸ್ಥಿತರಿದ್ದರು.