ಕೌಶಿಕ್ ಸುಬ್ರಹ್ಮಣ್ಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

0

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಅವರ ಪುತ್ರ ಕೌಶಿಕ್ ಸುಬ್ರಹ್ಮಣ್ಯ ರಾಷ್ಟ್ರೀಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಪಿ.ಯು ಕಾಮರ್ಸ್ ಒದುತ್ತಿರುವ ಕೌಶಿಕ್ ರ ಕಾಲೇಜು ತಂಡ ಕರ್ನಾಟಕ ವನ್ನು ಪ್ರತಿನಿಧಿಸಿ ರಾಜಸ್ಥಾನದ ಜೋದ್ ಪುರದಲ್ಲಿ ಅ.25 ರಿಂದ ಅ.28 ರ ವರೆಗೆ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಈ ಬಹುಮಾನ ಪಡೆದಿದ್ದಾರೆ. ಇಲಾಖಾ ಮಟ್ಟದ ಸ್ಪರ್ಧೆಯಲ್ಲಿ ತಾಲ್ಲೂಕು, ಜಿಲ್ಲೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದರು. ತಂಡದ ನಾಯಕನಾಗಿರುವ ಕೌಶಿಕ್ ಸುಬ್ರಹ್ಮಣ್ಯ ರ ತಾಯಿ ಗೀತಾ ರವಿ ಕಕ್ಕೆಪದವು.