ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಸಾಪ ಸಾಹಿತ್ಯ ಸಂಭ್ರಮ

0

ಸರಕಾರಿ ಪದವಿಪೂರ್ವ ವಿದ್ಯಾಲಯ ಪ್ರೌಢಶಾಲಾ ವಿಭಾಗದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರರ ನೆನಪು

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇವರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ಗಾಯನ ಕಾರ್ಯಕ್ರಮವು ನ. 2ರಂದು ಅಪರಾಹ್ನ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸುಳ್ಯದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸುಳ್ಯ ಇದರ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಕಾಡುತೋಟ ಇವರು ವಹಿಸಿದ್ದರು.


ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ದೀಪ ಬೆಳಗುವುದರ ಮೂಲಕ ನಡೆಸಿಕೊಟ್ಟರು ಹಾಗೂ ಉದ್ಘಾಟನಾ ಮಾತುಗಳನ್ನಾಡಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ನೆನಪು ಕಾರ್ಯಕ್ರಮವನ್ನು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ಶ್ರೀಮತಿ ಮಮತಾ ಎಂ ಜೆ ಇವರು ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್ ಡಿ.ಎಂ ಸಿ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಕಾಡುತೋಟ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ,ಹಿರಿಯ ಶಿಕ್ಷಕರಾದ ಸುಂದರ ಕೇನಾಜೆ ,ಶ್ರೀಮತಿ ಮಮತಾ ಎಂ ಜೆ ,ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಮತ್ತು ಶ್ರೀಮತಿ ಚಂದ್ರಮತಿ, ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತು ಪ್ರತಿನಿಧಿಗಳಾದ ರಾಮಚಂದ್ರ ಪಲ್ಲತ ಡ್ಕ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿಗಳಾದ ದಯಾನಂದ ಆಳ್ವ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಹೆಸರಾಂತ;ಗಾಯಕರಾದ ಕೆ ಆರ್ ಗೋಪಾಲಕೃಷ್ಣ ಅಧ್ಯಕ್ಷರು ಭಾವನಾ ಸುಗಮ ಸಂಗೀತ ಸುಳ್ಯ, ತೇಜಸ್ ಕಲ್ಲುಗುಂಡಿ ,ಶ್ರೀಮತಿ ಆರತಿ ಪುರುಷೋತ್ತಮ ಹಾಗೂ ಸಂಧ್ಯಾ ಮಂಡೆಕೋಲು ಇವರಿಂದ ವೈವಿಧ್ಯಮಯ ಗೀತಾ ಸಾಹಿತ್ಯ ಗಾಯನ ಕಾರ್ಯಕ್ರಮ ನಡೆಯಿತು ಸುಮಾರು 650 ವಿದ್ಯಾರ್ಥಿಗಳು ಮತ್ತು ಎಲ್ಲ ಶಿಕ್ಷಕ ವೃಂದದವರು ಕಾರ್ಯಕ್ರಮವನ್ನು ವೀಕ್ಷಿಸಿ ದರು.