ಪಂಜಿಕಲ್ಲು: ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಬಂದ ಕಾಡಾನೆ

0

ಭಯಭೀತಿಗೊಂಡ ವಾಹನ ಸವಾರರು

ಮಂಡೆಕೋಲು ಗ್ರಾಮದ ಮುರೂರು, ದೇವರಗುಂಡ ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಪರಿಸರದಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ಹಾನಿ ಮಾಡುತ್ತಿದ್ದು, ನ.10ರಂದು ಬೆಳಿಗ್ಗೆ ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಬಂದಿದ್ದು, ಸಾರ್ವಜನಿಕರು ಈ ದೃಶ್ಯವನ್ನು ಮೊಬೈಲ್ ಮೂಲಕ ವೀಡಿಯೋ ಮಾಡಿದ್ದಾರೆ.

ಜಾಲ್ಸೂರು – ಕಾಸರಗೋಡು ಅಂತರರಾಜ್ಯ ರಸ್ತೆಯ ಪಂಜಿಕಲ್ಲಿನಲ್ಲಿ ಆನೆ ನಡೆದುಕೊಂಡು ಬರುತ್ತಿದ್ದ ವೇಳೆ ಈ ರಸ್ತೆಯಾಗಿ ಬಂದ ಬೈಕ್ ಸವಾರರು ಹಾಗೂ ವಾಹನ ಪ್ರಯಾಣಿಕರ ಭಯಭೀತಿಗೊಂಡಿರುವುದಾಗಿ ತಿಳಿದುಬಂದಿದೆ.