ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ

0

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ವಾರ್ಷಿಕ ದಿನಾಚರಣೆ ಆರಂಭವಾಯಿತು. .
ಸುಬ್ರಹ್ಮಣ್ಯ ಗ್ರಾ. ಪಂ ಸದಸ್ಯೆ ಭವ್ಯ ಜೇನುಕೋಡಿ ಅವರು ಧ್ವಜಾರೋಹಣ ಮಾಡಿದರು. ಕಾರ್ಯಕ್ರಮವನ್ನು ಜ್ಞಾನದೀಪ ವಿಶ್ವಸ್ಥ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು ಕಾರ್ಯಕ್ರಮ ಉದ್ಘಾಟಿಸಿದರು.
ವಿದ್ಯಾರ್ಥಿನಿ ರುತ್ವಿಕಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಅನುಗ್ರಹ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್, ಶಾಲಾ ಸಂಚಾಲಕ ಚಂದ್ರಶೇಖರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಪ್ರೌಢಶಾಲಾ ಮುಖ್ಯಸ್ಥೆ ಶ್ರೀಮತಿ ವಿದ್ಯಾರತ್ನ ಆಡಳಿತ ಮಂಡಳಿಯ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಯಜ್ಞೇಶ್ ಆಚಾರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಭಾರತೀ ದಿನೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತೀರ್ಥೇಶ್ ಪಾರೆಪ್ಪಾಡಿ, ಶಾಲಾ ನಾಯಕರುಗಳಾದ ಪ್ರೀತಂ, ಪ್ರದೇಶ್ ವೇದಿಕೆಯಲ್ಲಿದ್ದರು.
ಸಭೆಯ ಬಳಿಕ ವಿದ್ಯಾರ್ಥಿಗಳಿಂದ ಯೋಗಾಸನ, ನಾಟಕ,
ಯಕ್ಷಗಾನ, ಕರಾಟೆ ಪ್ರದರ್ಶನ, ನರ್ಸರಿ ಮತ್ತು ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.