ಚೊಕ್ಕಾಡಿ ಶ್ರೀ ಉಳ್ಳಾಕುಲು ನಾಯರ್ ದೈವಸ್ಥಾನದ ರಸ್ತೆ ಕಾಂಕ್ರೀಟೀಕರಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

0

ಅಮರಪಡ್ನೂರು ಗ್ರಾಮದ ಕಾರಣಿಕ ಕ್ಷೇತ್ರವಾಗಿರುವ ಚೊಕ್ಕಾಡಿ ಶ್ರೀ ಉಳ್ಳಾಕುಲು ನಾಯರ್ ದೈವಸ್ಥಾನದ ರಸ್ತೆ ಕಾಂಕ್ರೀಟ್ ಕಾಮಗಾರಿಗೆ
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಇಂದು ಬೆಳಗ್ಗೆ ಗುದ್ದಲಿ ಪೂಜೆ ನೆರವೇರಿಸಿದರು.


ಶಾಸಕರ ವಿಶೇಷ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ನಡೆಯಲಿದ್ದು ಗುದ್ದಲಿ ಪೂಜೆಯನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ, ಉಪಾಧ್ಯಕ್ಷೆ ಭುವನೇಶ್ವರಿ ಪದವು, ಚೊಕ್ಕಾಡಿ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ, ಉಳ್ಳಾಕುಲು ದೈವಸ್ಥಾನದ ಅರ್ಚಕ ಮಾಧವ ಗೌಡ ಪೂಜಾರಿಮನೆ, ಪಂ.ಸದಸ್ಯರಾದ ದಿವ್ಯ ಮಡಪ್ಪಾಡಿ, ರಾಧಾಕೃಷ್ಣ ಕೊರತ್ಯಡ್ಕ, ಜಯಪ್ರಕಾಶ್ ದೊಡ್ಡಿಹಿತ್ಲು,
ಸೀತಾ ಪದವು, ಜನಾರ್ದನ ಪೈಲೂರು, ವೆಂಕಟ್ರಮಣ ಇಟ್ಟಿಗುಂಡಿ, ಸೊಸೈಟಿ ಮಾಜಿ ಅಧ್ಯಕ್ಷ ಸದಾಶಿವ ಗೌಡ ಮೂಕಮಲೆ, ನಿರ್ದೇಶಕ ಗಣೇಶ್ ಪಿಲಿಕಜೆ, ಹರೀಶ್ ಜೋಗಿಯಡ್ಕ, ಶರಣ್ ಕರ್ಮಾಜೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.