ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ

0

ದ.ಕ. ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನ.11ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯದ ಬಂಟರ ಭವನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸುಳ್ಯ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಂಟರ ಸಂಘದ ಉಪಾಧ್ಯಕ್ಷ ಜೆ.ಕೆ. ರೈ, ಬಂಟರ ಸಂಘದ ಅರಂತೋಡು ವಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಉಬರಡ್ಕ, ಕುಸುಮಾಧರ ರೈ ಸೇರಿದಂತೆ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.