ಡಿ.12: ಆಲೆಟ್ಟಿ: ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ- ಗುಳಿಗ ದೈವದ ಕೋಲ

0

ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀ
ವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ಕೋಲವು ಡಿ.12 ರಂದು ನಡೆಯಲಿರುವುದು ಎಂದು ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ.ಗೋಕುಲ್‌ದಾಸ್ ಹೇಳಿದರು.

ಸುಳ್ಯಪ್ರೆಸ್‌ಕ್ಲಬ್‌ನಲ್ಲಿ ನ.11 ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.12 ರಂದು ಬೆಳಿಗ್ಗೆ ಗಂಟೆ 7.30ರಿಂದ ಬಿ.ಶಂಕರನಾರಾಯಣ ಕಡಮಣ್ಣಾಯ ಬಂಬ್ರಾಣ ತಂತ್ರಿವರ್ಯರ ನೇತೃತ್ವದಲ್ಲಿ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷ ಬಲಿ, ತಂಬಿಲ ಸೇವೆ ವೈದಿಕ ಕಾರ್ಯಕ್ರಮ
ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6 ರಿಂದ ಶ್ರೀ ಗುಳಿಗ ದೈವದ ಕೋಲವು ನಡೆಯಲಿದ್ದು ಆಗಮಿಸಿದ ಎಲ್ಲರಿಗೂ ಪ್ರಸಾದ ವಿತರಣೆ ಹಾಗೂ ರಾತ್ರಿ ಸಮಯದಲ್ಲಿ ಸಾರ್ವಜನಿಕ ಅನ್ನ ಸಂತರ್ಪಣೆಯು ನಡೆಯಲಿದೆ. ವಾರ್ಷಿಕ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಗಂಟೆ 7 ರಿಂದ ಸಂಜೆ 4 ಗಂಟೆಯ ತನಕ ತಾಲೂಕಿನ ವಿವಿಧ ಭಜನಾ ಮಂಡಳಿಯ ಭಜಕರಿಂದ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಭಜನೆಯು ಮಹಾಮಂಗಳಾರತಿಯೊಂದಿಗೆಸಂಪನ್ನವಾಗಲಿರುವುದು.


ಸಭಾ ಕಾರ್ಯಕ್ರಮ:


ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮವುಉತ್ಸವ ಸಮಿತಿಯ ಗೌರವಾಧ್ಯಕ್ಷ ವಾಸುದೇವ ಗೌಡ ಕುಡೆಕಲ್ಲು ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್‌ನಅಧ್ಯಕ್ಷ ಕೆ.ಗೋಕುಲ್‌ದಾಸ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕಿ ಕು. ಭಾಗೀರಥಿ ಮುರುಳ್ಯ, ಆಲೆಟ್ಟಿ
ಪಂಚಾಯತ್ ಅಧ್ಯಕ್ಷೆ ವೀಣಾಕುಮಾರಿ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ, ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದ ಅಧ್ಯಕ್ಷ ನಾರಾಯಣ ಕೇಕಡ್ಕ, ಉತ್ಸವ ಸಮಿತಿ ಅಧ್ಯಕ್ಷ ಕರುಣಾಕರ ಪಾಲಡ್ಕ, ಪ್ರಗತಿಪರ ಕೃಷಿಕರಾದ ಪ್ರಭಾಕರ ರೈ ಪೆರಾಜೆ, ಲೋಕೇಶ್ ಸುಳ್ಳಿ,
ಆಲೆಟ್ಟಿ ಪಂಚಾಯತ್ ಸದಸ್ಯರಾದ ಸುಧೇಶ್ಅ ರಂಬೂರು, ಪುಷ್ಪಾವತಿ ಕುಡೆಕಲ್ಲು, ಅನಿತಾ ಇಡ್ಯಡ್ಕ, ವೇದಾವತಿ, ಅರಂಬೂರು, ರತೀಶನ್ ಅರಂಬೂರು ಭಾಗವಹಿಸಲಿದ್ದಾರೆ ಎಂದು ಗೋಕುಲ್‌ದಾಸ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ವಾಸುದೇವ ಗೌಡ ಕುಡೆಕಲ್ಲು, ಉತ್ಸವ ಸಮಿತಿ ಅಧ್ಯಕ್ಷ ಕರುಣಾಕರ ಪಾಲಡ್ಕ ಪ್ರಧಾನ ಕಾರ್ಯದರ್ಶಿ ಜನಾರ್ಧನ ಚೊಕ್ಕಾಡಿ ಸಿರಿಕುರಲ್ ನಗರ, ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕಲ್ವರ್ಪೆ, ಖಜಾಂಜಿ ಬೆಳ್ಯಪ್ಪ ಗೌಡ, ಗ್ರಾ.ಪಂ.ಸದಸ್ಯ ಸುಧೇಶ್ ಅರಂಬೂರು ಉಪಸ್ಥಿತರಿದ್ದರು.

ಆಮಂತ್ರಣ ಪತ್ರ ಬಿಡುಗಡೆ:

ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಗುಳಿಗ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.