ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತಂಬಿಲ ಸೇವೆ

0

ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೈವಗಳಿಗೆ ತಂಬಿಲ ಸೇವೆಯು ನ.12ರಂದು ಜರುಗಿತು.
ದೈವಸ್ಥಾನಕ್ಕೆ ಸಂಬಂಧಿಸಿದ ಮಾಡಗಳಲ್ಲಿ ತಂಬಿಲ ಸೇವೆ ನಡೆಯಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ ಕುಕ್ಕಂದೂರು ಸೇರಿದಂತೆ ಸೋಣಂಗೇರಿ ಹತ್ತು ಒಕ್ಕಲು ಮತ್ತು ಕುಕ್ಕನ್ನೂರು ಹದಿನಾರು ಒಕ್ಕಲಿನ ಹಿರಿಯರು, ಪದಾಧಿಕಾರಿಗಳು, ಆಡಳಿತ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.