ದುಗ್ಗಲಡ್ಕದಲ್ಲಿ ದೀಪಾವಳಿ ಆಚರಣೆ- ಕುಟುಂಬ ಸಮ್ಮಿಲನ

0

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಆಚರಣೆ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ನ.12 ರಂದು ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದ ನೂತನ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ದುಗ್ಗಲಾಯ ಯುವ ಸೇವಾ ಸಮಿತಿಯ ಅಧ್ಯಕ್ಷರಾದ ನಾರಾಯಣ ನಾಯ್ಕ ದುಗ್ಗಲಡ್ಕ ನೆರವೇರಿಸಿದರು. ಸುಬ್ರಹ್ಮಣ್ಯ ಸಿ.ಕೆ‌.ಐವರ್ನಾಡು ದೀಪಾವಳಿಯ ವಿಶೇಷತೆಗಳ ಬಗ್ಗೆ ಮಾತನಾಡಿದರು. ಬೆಂಗಳೂರಿನ ಗಾರ್ಮೆಟ್ ಸಂಸ್ಥೆಯ ಶಾಖಾ ವ್ಯವಸ್ಥಾಪಕರಾಗಿರುವ ವೆಂಕಟೇಶ್ ಮೇನಾಲ ಮುಖ್ಯ ಅತಿಥಿಯಾಗಿದ್ದರು. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಚೇತನ್ ಕಲ್ಮಡ್ಕ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೆ.ಟಿ.ವಿಶ್ವ ನಾಥರನ್ನು ಜಂಟಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಅತಿಥಿ ವೆಂಕಟೇಶ್ ಮೇನಾಲರವರು ವೈಯಕ್ತಿಕವಾಗಿ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ದಯಾನಂದ ಸಾಲಿಯಾನ್ ಮೂಡೆಕಲ್ಲು, ದುಗ್ಗಲಾಯ ದೈವಸ್ಥಾನ ಸಮಿತಿಯ ಅಧ್ಯಕ್ಷರಾದ ಸುಂದರ ರಾವ್ ಕೊಡೆಂಚಡ್ಕ, ಕುರಲ್ ತುಳುಕೂಟದ ಗೌರವಾಧ್ಯಕ್ಷ ನಾರಾಯಣ ಟೈಲರ್, ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಕೆ.ಟಿ.ಭಾಗೀಶ್ ಸ್ವಾಗತಿಸಿ, ರಮೇಶ್ ನೀರಬಿದಿರೆ ವಂದಿಸಿದರು. ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ, ಬಹುಮಾನ ವಿತರಿಸಲಾಯಿತು.