ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆ ಭೇಟಿ‌ಮಾಡಿ ಅನುದಾನಕ್ಕೆ ಮನವಿ ಸಲ್ಲಿಕೆ

0

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮೀಣಾಭಿವೃದಿ ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರಾದ ಪ್ರಿಯಾಂಕಾ ಖರ್ಗೆ ಭೇಟಿ ಮಾಡಲಾಯಿತು.


ಸಂಪಾಜೆ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಒದಗಿಸುವಂತೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ, ಕೆಪಿಸಿಸಿ ಮುಖ್ಯ ವಕ್ತಾರಾ ಟಿ. ಎಂ. ಶಾಹಿದ್ ತೆಕ್ಕಿಲ್ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್, ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ,ಅನುಪಮಾ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ ಉಬೈಸ್ ಗೂನಡ್ಕ ಜೆ. ಬಿ ಹನೀಫ್ ಕಲ್ಲುಗುಂಡಿ ಉಪಸ್ಥಿತರಿದ್ದರು.