ಜ್ಞಾನಮಂದಾರ ಟ್ರಸ್ಟ್ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ.ವಿಶ್ವನಾಥ ರಿಗೆ ಸನ್ಮಾನ

0

ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಸುಳ್ಯ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕೆ. ಟಿ. ವಿಶ್ವನಾಥ ರನ್ನು ನ. 15ರಂದು ಸಂಘದ ಕಚೇರಿಯಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ಬೆಂಗಳೂರು -ಮಂಗಳೂರು ಇದರ ವತಿಯಿಂದ ಸನ್ಮಾನಿಸಲಾಯಿತು.


ಸಂಸ್ಥೆಯ ಸಂಸ್ಥಾಪಕರಾದ ಸೋಮಶೇಖರ್ ರವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾದ ಪಿ.ಸಿ. ಜಯರಾಮ್, ಉಪಾಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಕೆ.ಸಿ. ಸದಾನಂದ, ಪಿ. ಎಸ್. ಗಂಗಾಧರ್, ದಿನೇಶ್ ಮಡಪ್ಪಾಡಿ,ಸಂಸ್ಥೆಯ ಸಿಬ್ಬಂದಿಗಳಾದ ಯಂ.ಚಂದ್ರಶೇಖರ,ಕುಸುಮಾಧರ, ಮನೋಜ್ ಪಾನತ್ತಿಲ, ಜಗದೀಶ್ ಕೆ.ಆರ್.,ಕಾರ್ತಿಕ್,ಸುರೇಶ್ ಎಂ‌.ಮತ್ತು ಟಾಟಾ ಎಐಜಿ ಇನ್ಸೂರೆನ್ಸ್ ಕಂಪೆನಿ ಇದರ ಸಲಹೆಗಾರರಾದ ರಾಜು ಸೂರ್ಯ ಮತ್ತು ಹರ್ಷ ಎಂ‌.ಆರ್.ಉಪಸ್ಥಿತರಿದ್ದರು.