ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ನಾಯಕ ಜಗದೀಶ್ ಕುಂಬ್ಳೆ ಭೇಟಿ

0

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ನಾಯಕ ಜಗದೀಶ್ ಕುಂಬ್ಳೆಯವರು ಇಂದು ( ನ. 18 ) ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸುರುರವರು ಜಗದೀಶ್ ಕುಂಬಳೆಯವರಿಗೆ ಶ್ರೀ ದೇವರ ಪ್ರಸಾದ ನೀಡಿ ಶಾಲು ಹಾಕಿ ಗೌರವಿಸಿದರು. ಸುಳ್ಯದಲ್ಲಿ ನಡೆಯುತ್ತಿರುವ ಕಬಡ್ಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಜಗದೀಶ್ ಕುಂಬಳೆಯವರು ದೇವಸ್ಥಾನದ ಕ್ರೀಡಾಂಗಣದಲ್ಲಿ ನಡೆದ ವಿವೇಕಾನಂದ ವಿದ್ಯಾ ಸಂಸ್ಥೆಗಳ ಕ್ರೀಡೋತ್ಸವದಲ್ಲಿ ಭಾಗಿಯಾಗಿದ್ದರು.