ಮರ್ಕಂಜ : ಮಿನುಂಗೂರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಿದ್ಧತೆ

0

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಲ್ಲಿ ಒಂದಾದ ಕಾರಣಿಕ ಕ್ಷೇತ್ರ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಗೊಳ್ಳಲಿದ್ದು, ಆ ಪ್ರಯುಕ್ತ ಬಾಲಾಲಯ ಪ್ರತಿಷ್ಠೆಯು ನಾಳೆ (ನ.20) ನಡೆಯಲಿದೆ.‌ ಮುಂಜಾನೆ ಗಣಪತಿ‌ ಪ್ರಾರ್ಥನೆ, ಹೋಮ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಅನುಜ್ಞಾ ಪ್ರಾರ್ಥನೆ ಹಾಗೂ ಮಧ್ಯಾಹ್ನ 11.30ರಿಂದ 12.30ರ ಮಕರ ಲಗ್ನದಲ್ಲಿ ಬಾಲಾಲಯ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ.