ನ.30ರಂದು ಬೆಳ್ಳಾರೆಯಲ್ಲಿ ಜ್ಞಾನ ಸಂಭ್ರಮ

0


ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ 16ನೇ ವರ್ಷದ ಜ್ಞಾನ ಸಂಭ್ರಮ, ಪ್ರತಿಭಾ ಪುರಸ್ಕಾರ ಮತ್ತು ಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಆಯ್ಕೆಯಾದ ಗಣೇಶ್ ನಾಯಕ್ ಪುತ್ತೂರು ಅವರಿಗೆ ಅಭಿನಂದನಾ ಕಾರ್ಯಕ್ರಮ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನ.30ರಂದು ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅಭಿನಂದನಾ ಭಾಷಣ ಮಾಡಲಿದ್ದಾರೆ. ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ರಾಮ ಪಾಟಾಜೆ, ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ. ಶಶಿಧರ್, ಬೆಳ್ಳಾರೆ ಸ್ನೇಹಿತರ ಕಲಾಸಂಘದ ಅಧ್ಯಕ್ಷ ಪದ್ಮನಾಭ ಬೀಡು, ಬೆಳ್ಳಾರೆ ಜೆ.ಸಿ.ಐ.ನ ನಿಯೋಜಿತ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್. ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸದಾನಂದ ಕಣ್ವರ್ಷಿ ನಿರ್ದೇಶನದಲ್ಲಿ ಸುಳ್ಯದ ಶ್ರುತಿ ಗಾಯನ ಮೆಲೋಡಿಸ್ ನ ಹರ್ಷಿತ್ ಮರ್ಕಂಜ ನಿರೂಪಣೆಯಲ್ಲಿ ಸಂಸ್ಥೆಯ ಪ್ರಥಿತ ಪ್ರತಿಭಾ ವೇದಿಕೆಯ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.