ಜ.13 ರಂದು ದುಗ್ಗಲಡ್ಕದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ; ಆಮಂತ್ರಣ ಬಿಡುಗಡೆ

0


ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಜ.13ರಂದು ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರ ಮತ್ತು ಲಕ್ಕಿ ಕೂಪನ್ ನ ಬಿಡುಗಡೆ ನ. 26 ರಂದು ಯುವಕ ಮಂಡಲದ ಕಟ್ಟಡದಲ್ಲಿ ನಡೆಯಿತು.


ಹಿರಿಯ ಸದಸ್ಯರಾದ ಕೃಷ್ಣಸ್ವಾಮಿ ಕಂದಡ್ಕ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು.ನ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ಮಾಜಿ ಸದಸ್ಯ ಇಬ್ರಾಹಿಂ ನೀರಬಿದಿರೆ, ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಗೌರವಾಧ್ಯಕ್ಷ ನಾರಾಯಣ ಟೈಲರ್, ಅಧ್ಯಕ್ಷೆ ನವ್ಯಾ ದಿನೇಶ್ ಕೊಯಿಕುಳಿ, ವಾರಿಜ ಕೊರಗಪ್ಪ ಗೌಡ, ಯುವಕ ಮಂಡಲದ ಅಧ್ಯಕ್ಷ ಚೇತನ್ ಕಲ್ಮಡ್ಕ, ಕಾರ್ಯದರ್ಶಿ ಪ್ರದೀಪ್ ಕೊಯಿಕುಳಿ , ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಉತ್ಸವದ ಅಂಗವಾಗಿ ಅಂಗನವಾಡಿ ಪುಟಾಣಿಗಳು, ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ರಂಗಮಯೂರಿ ಕಲಾ ಶಾಲೆಯ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರಸಿದ್ಧ ಗಾಯಕರಿಂದ ಸಂಗೀತ ರಸಮಂಜರಿ,
ಸ್ಥಳೀಯರಿಂದ ನೃತ್ಯ ಮತ್ತು ಗಾಯನ, ಮಂಗಳೂರಿನ ಚಾ ಪರ್ಕ ಕಲಾವಿದರಿಂದ ಪುದರ್ ದೀತಾಂಡ್ ತುಳು ನಾಟಕ ಪ್ರದರ್ಶನಗೊಳ್ಳಲಿದೆ.