ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವದ ಬಗ್ಗೆ ಜೀರ್ಣೋದ್ಧಾರ ಸಮಿತಿಯ ಪೂರ್ವಭಾವಿ ಸಭೆ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜಾತ್ರೋತ್ಸವವು ಜನವರಿ ತಿಂಗಳಲ್ಲಿ ನಡೆಯಲಿದ್ದು ಈ ಬಗ್ಗೆ ಜೀರ್ಣೋದ್ಧಾರ ಸಮಿತಿ ಸಭೆಯು ನ.27 ರಂದು ದೇವಸ್ಥಾನದಲ್ಲಿ ನಡೆಯಿತು.


ಡಿಸೆಂಬರ್ 25 ರ ನಂತರ ಜಾತ್ರೋತ್ಸವದ ಬಗ್ಗೆ ಭಕ್ತಾದಿಗಳ ಸಭೆಯನ್ನು ಕರೆಯುವುದೆಂದು ನಿರ್ಣಯಿಸಲಾಯಿತು.
ಹಾಗೂ ಜಾತ್ರೋತ್ಸವದಲ್ಲಿ ನಡೆಯುವ ವೈದಿಕ ಕಾರ್ಯಕ್ರಮಗಳ ಬಗ್ಗೆ, ಟೆಂಡರ್ ಪ್ರಕ್ರಿಯೆ ಬಗ್ಗೆ ,ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಾತ್ರೋತ್ಸವ ಯಶಸ್ವಿಯಾಗಿ ನಡೆಯಲು ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು.


ಸಾಂಸ್ಕೃತಿಕ ಕಾರ್ಯಕ್ರಮ ಉಚಿತವಾಗಿ ನಡೆಸಿಕೊಡುವವರು ಇದ್ದಲ್ಲಿ ದೇವಸ್ಥಾನವನ್ನು ಸಂಪರ್ಕಿಸಬೇಕಾಗಿ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ,ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ,ಎನ್.ಜಯಪ್ರಕಾಶ್ ರೈ,ಲಿಂಗಪ್ಪ ಗೌಡ ಕೇರ್ಪಳ ಹಾಗೂ ಕೃಪಾಶಂಕರ ತುದಿಯಡ್ಕ ಉಪಸ್ಥಿತರಿದ್ದರು.