ಕಲ್ಲುಮುಟ್ಲು ಅಂಗನವಾಡಿ ಬಳಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಅಪಾಯಕಾರಿ ಹೊಂಡ

0

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ಬಳಿಯ ರಸ್ತೆ ಬದಿ ಪೈಪು ಲೈನ್ ದುರಸ್ತಿ ಪಡಿಸಲು ತೆಗೆದಿರುವ ಹೊಂಡವನ್ನು ಮುಚ್ಚದೆ ಹಾಗೆ ಬಿಟ್ಟಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕಳೆದ ಎರಡು ವಾರಗಳ ಹಿಂದೆ ಪೈಪು ಲೈನ್ ಒಡೆದು ನೀರು ಪೋಲಾಗುತ್ತಿರುವುದನ್ನು ಸರಿ ಪಡಿಸಲು ದುರಸ್ತಿ ಕಾರ್ಯವನ್ನು ನಗರ ಪಂಚಾಯತ್ ಸಿಬ್ಬಂದಿಗಳು ಸರಿಪಡಿಸಲು ತೆಗೆದ ಹೊಂಡವನ್ನು ಹಾಗೆ ಬಿಟ್ಟಿರುತ್ತಾರೆ. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಹೊಂಡದಲ್ಲಿ ನೀರು ತುಂಬಿದ್ದು ವಾಹನ ಸವಾರರಿಗೆ ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ.