ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

0

ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆಯು ನ.30 ರಂದು ನಡೆಯಿತು.
ಶಾಲಾ ಮುಖ್ಯ ಶಿಕ್ಷಕ ನಾಗರಾಜ ಜಿ. ಆರ್. ರವರು ಕನಕ ಜಯಂತಿ ಆಚರಣೆ ಹಾಗೂ ದಾಸರ ಬಗ್ಗೆ ಮಾಹಿತಿ ನೀಡಿದರು.
ಶಿಕ್ಷಕಿಯರಾದ ಚಂದ್ರಮತಿ ಮತ್ತು ಸುಮನ ಕೆ. ಪಿ. ದಾಸರ ಕೀರ್ತನೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಚಂದ್ರಮತಿ ಕೆ. ಎಂ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಬೇಬಿ ಎ. ವಂದಿಸಿದರು.