ಸುಳ್ಯ ಎನ್ನೆoಪಿಯುಸಿಯಲ್ಲಿ ಶಿಕ್ಷಕ ರಕ್ಷಕ ಸಭೆ

0

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಭೆ ನಡೆಸಲಾಯಿತು .

ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದವಿ ವಿಭಾಗದ ಪ್ರಾಚಾರ್ಯರಾದ ಪ್ರೊ ರುದ್ರ ಕುಮಾರ್ ಎಂ ಎಂ,ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ಮತ್ತು ಕಲಿಕಾ ಪ್ರಗತಿಗೆ ಪೂರಕ ಅಂಶಗಳು,ಶಿಕ್ಷಕರ ಪೋಷಕರ ಜವಾಬ್ದಾರಿ, ಮಾರ್ಗದರ್ಶನದ ಕುರಿತಾಗಿ ಮಾತನಾಡಿದರು.ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಉಪಸ್ಥಿತರಿದ್ದರು.

ಆರಂಭದಲ್ಲಿ ವಿದ್ಯಾರ್ಥಿನಿಯರಾದ ಅಂಬಿಕಾ ಮತ್ತು ಬಳಗದವರು ಆಶಯ ಗೀತೆ ಹಾಡಿದರು. ವಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಸ್ವಾಗತಿಸಿ,ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ ವಂದಿಸಿ, ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿ,ಪೋಷಕರೊಂದಿಗೆ ಸಂವಾದ ನಡೆಯಿತು.