ಕೆ ವಿ ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ತ್ರಿವಳಿ ಪ್ರಥಮ ಬಹುಮಾನ

0


ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಸುಳ್ಯ ತಾಲೂಕು ಮಟ್ಟದಲ್ಲಿ ನಾಲ್ಕು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಮೂರು ಸ್ಪರ್ಧೆಗಳಲ್ಲಿ ಅಮರಜ್ಯೋತಿ ಕಾಲೇಜಿಗೆ ಪ್ರಥಮ ಸ್ಥಾನ ಬಂದಿರುತ್ತದೆ.

ಇಂಗ್ಲಿಷ್ ಪ್ರಭಂದ ಸ್ಪರ್ಧೆಯಲ್ಲಿ ಗಗನ್ ದೀಪ್ ಪ್ರಥಮ ವಾಣಿಜ್ಯ , ಕನ್ನಡ ಪ್ರಭಂದ ಸ್ಪರ್ಧೆಯಲ್ಲಿ ಸಾನಿಕ ರೈ ಪ್ರಥಮ ವಿಜ್ಞಾನ ಹಾಗೂ ಬಿತ್ತಿ ಚಿತ್ರ ಸ್ಪರ್ಧೆಯಲ್ಲಿ ಮನುಶ್ರೀ ಯು ಬಿ ಪ್ರಥಮ ವಿಜ್ಞಾನ,ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಡಿಸೆಂಬರ್ 4 ರಂದು ಕೆನರಾ ಕಾಲೇಜಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಹಾಗೂ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಭೋದಕ ಭೋದಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.