ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0

ಚಂಪಾಷಷ್ಠಿ ಮಹೋತ್ಸವದ ಕುರಿತು ಪೂರ್ವಭಾವಿ ಸಭೆ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ಮೃತ್ಯುಂಜಯ ಹೋಮವು ಡಿ.3ರಂದು ಬೆಳಿಗ್ಗೆ ಜರುಗಿತು.

ಬೆಳಿಗ್ಗೆ 6ರಿಂದ ಸಾಮೂಹಿಕ ಪ್ರಾರ್ಥನೆಯೊಂದಿಗೆ ಮೃತ್ಯುಂಜಯ ಹೋಮವು ಪ್ರಾರಂಭಗೊಂಡು ಪೂರ್ಣಾಹುತಿಯೊಂದಿಗೆ ಮುಕ್ತಾಯಗೊಂಡಿತು.

ಮೃತ್ಯುಂಜಯ ಹೋಮದ ಬಳಿಕ ಚಂಪಾಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಹಂಚುವ ಕುರಿತು ಹಾಗೂ ಚಂಪಾಷಷ್ಠಿ ಮಹೋತ್ಸವದ ಕುರಿತು ದೇವಸ್ಥಾನದ ವಿವಿಧ ಬೈಲುವಾರು ಸಮಿತಿಯ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಶರತ್ ಅಡ್ಕಾರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಸುಮಾರು ನೂರಕ್ಕೂ ಅಧಿಕ ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.