ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು, ಬೆಳ್ಳಾರೆ ಶಾಖೆಯಲ್ಲಿ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ ಪುರಸ್ಕೃತ ಮುಗುಪ್ಪು ಕೂಸಪ್ಪ ಗೌಡರಿಗೆ ಸನ್ಮಾನ

0

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆಯ ಸಲಹಾ ಸಮಿತಿ ಸದಸ್ಯರಾಗಿದ್ದು ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡಿದ ರಾಜ್ಯ ಮಟ್ಟದ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ ಸ್ವೀಕರಿಸಿದ ಕೂಸಪ್ಪ ಗೌಡ ಮುಗುಪ್ಪುರವರಿಗೆ ಸನ್ಮಾನ ಕಾರ್ಯಕ್ರಮವು ಡಿ.05 ರಂದು ಬೆಳ್ಳಾರೆ ಶಾಖೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿಯವರು ಹಾಗೂ ಬೆಳ್ಳಾರೆ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಸತೀಶ್ ಪಾಂಬಾರು,ಉಪಾಧ್ಯಕ್ಷ ಲೋಕೇಶ್ ಚಾಕೋಟೆಯವರು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಕೂಸಪ್ಪ ಗೌಡರವರು ಮಾತನಾಡಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ, ಬೆಳ್ಳಾರೆ ಶಾಖೆಯ ಸಲಹಾ ಸಮಿತಿ ಸದಸ್ಯರಾದ ನಾರಾಯಣ ಗೌಡ ಆರ್ವಾರ,ಎಲ್ಯಣ್ಣ ಗೌಡ ಕುಳ್ಳಂಪಾಡಿ, ಉಮೇಶ್ ಕೆಎಂಬಿ, ವಾಸುದೇವ ಗೌಡ ನಡ್ಕ, ಮುರಳೀಧರ ಕೆಮ್ಮಾರ,ರವೀಂದ್ರ ಗೌಡ ಮರಕ್ಕಡ,ಪದ್ಮನಾಭ ಬೀಡು,ರವಿನಾಥ ಮಡ್ತಿಲ, ಕಮಲಾವತಿ ಎನ್.ಎಸ್,ಪ್ರಶಾಂತ್ ಟಿ.ಎಂ, ಕೃಷ್ಣಪ್ಪ ಗೌಡ ಕೋಡ್ತುಗುಳಿ, ಹಾಗು ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಧರ್ಮರಾಜ್,ಸಿಬ್ಬಂದಿಗಳಾದ ಶಿವಕುಮಾರ್ ,ದೇವರಾಜ್ ಉಪಸ್ಥಿತರಿದ್ದರು. ಬೆಳ್ಳಾರೆ ಶಾಖೆಯ ಶಾಖಾಧಿಕಾರಿ ಕಾರ್ತಿಕ್ ಸ್ವಾಗತಿಸಿ,ವಂದಿಸಿದರು.