ಬೇಂಗಮಲೆ – ಚೊಕ್ಕಾಡಿ ರಸ್ತೆ ಅಗಲೀಕರಣ ಕಾಮಗಾರಿ ಮತ್ತೆ ಆರಂಭ

0

ರಸ್ತೆ ಅಗಲೀಕರಣಕ್ಕೆ ರಸ್ತೆ ಬದಿಯ ಮರಗಳ ಸಮಸ್ಯೆ – ಮರಗಳ ತೆರವಿಗೆ ಗ್ರಾಮಸ್ಥರ ಒತ್ತಾಯ

ಸೋಣಂಗೇರಿ – ಬೇಂಗಮಲೆ ಚೊಕ್ಕಾಡಿ ರಸ್ತೆ ಅಗಲೀಕರಣ ಕಾಮಗಾರಿ ಮತ್ತೆ ಆರಂಭಗೊಂಡಿದೆ. ಈ ರಸ್ತೆಯ ಅಭಿವೃದ್ಧಿಗೆ ಶಾಸಕರಾಗಿದ್ದ ಎಸ್.ಅಂಗಾರರವರು ರೂ.2 ಕೋಟಿ ಅನುದಾನ ತರಿಸಿದ್ದರು.
ಇದೀಗ ಆ ಅನುದಾನದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು ಬೇಂಗಮಲೆ – ಚೊಕ್ಕಾಡಿ ರಸ್ತೆ ಕೆಲಸ ಆರಂಭಗೊಂಡು ಪ್ರಸ್ತುತ ಕಣಿಪ್ಪಿಲದಲ್ಲಿ ರಸ್ತೆ ಅಗಲೀಕರಣ ಕೆಲಸ ನಡೆಯುತ್ತಿದೆ.


ಆದರೆ ಈ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳ್ಳಬೇಕಾದರೆ ರಸ್ತೆಯ ಬದಿಯಲ್ಲಿರುವ ಮರಗಳ ತೆರವು ಕಾರ್ಯ ಕೂಡಲೇ ಆಗಬೇಕಾಗಿದೆ.
ರಸ್ತೆ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯವರು ರಸ್ತೆ ಬದಿಯ ಮರ ತೆರವುಗೊಳಿಸಲು ಅನುಮತಿ ನೀಡಬೇಕಾಗಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಮರಗಳ ತೆರವುಗೊಳಿಸಿ ರಸ್ತೆ ಅಭಿವೃದ್ದಿಯಾಗಲು ಸಹಕರಿಸಬೇಕೆಂದು ಗ್ರಾಮಸ್ಥರು ವಿನಂತಿಸಿದ್ದಾರೆ.