ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಗೆ ಅಶೋಕ್ ಎಡಮಲೆ

0

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕ ದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರನ್ನು ನೇಮಕ ಮಾಡಿದ್ದು ಅವರಲ್ಲಿ ಅಶೋಕ್ ಎಡಮಲೆ ಒಬ್ಬರಾಗಿದ್ದಾರೆ.

ಡಿಸೆಂಬರ್ 31ರಂದು ದೆಹಲಿಯಲ್ಲಿ ನಡೆಯುವ 12 ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಅಶೋಕ್ ಎಡಮಲೆಯವರು ಕಳೆದ 2021 ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರ ಆಯ್ಕೆಯಾಗಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ 3 ವರ್ಷದ ಅವಧಿಗೆ ಚುನಾಯಿತರಾಗಿದ್ದರು. ಕಳೆದ ಬಾರಿ 2022 ರಲ್ಲಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಅವರು ಸುಳ್ಯ ವಿಧಾನಸಭಾ ಅಧ್ಯಕ್ಷ, ರಾಜ್ಯ ವಿದ್ಯಾರ್ಥಿ ಹಾಗೂ ಯುವ ಘಟಕದ ರಾಜ್ಯ ಕಾರ್ಯಕಾರಿ ಸಮಿತಿ‌ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿಯೂ, ಕಾರ್ಯ ನಿರ್ವಹಿಸಿದ್ದರು. ರಾಜ್ಯದಿಂದ ಮಾದ್ಯಮ ಚರ್ಚೆಯಲ್ಲಿಯೂ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.

ಆಮ್ ಆದ್ಮಿ ಪಕ್ಷವು ಕಳೆದ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 208 ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ,ಇವರು ಜಿಲ್ಲಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸಿ ಸ್ಪರ್ಧಿಸಿತ್ತು.