ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

0

ಅಜ್ಜಾವರದಲ್ಲಿ ನಡೆದ 1753 ನೇ ಮದ್ಯವರ್ಜನ ಶಿಬಿರದ ಆಯೋಜನೆಗೆ ಹೆಗ್ಗಡೆಯವರಿಂದ ಪ್ರಶಸ್ತಿ ಪುರಸ್ಕಾರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಿರುವ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ ಕಾರ್ಯಕ್ರಮವು ಇಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಅಜ್ಜಾವರದಲ್ಲಿ ನಡೆದ 1753 ನೇ ಮದ್ಯವರ್ಜನ ಶಿಬಿರಕ್ಕೆ ವರ್ಷದ ಅತ್ಯುತ್ತಮ ಮದ್ಯವರ್ಜನ ಶಿಬಿರ ಸಂಘಟನೆಗಾಗಿ “ಜನಜಾಗೃತಿ ಸಾಧನಾ ಪ್ರಶಸ್ತಿ ” ಲಭಿಸಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ ರವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.

ಈ‌ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ಅಧ್ಯಕ್ಷ ಲೋಕನಾಥ್ ಅಮೆಚೂರ್, ಮಾಜಿ ಅಧ್ಯಕ್ಷರಾದ ಮಹೇಶ್ ಕುಮಾರ್ ರೈ ಮೇನಾಲ, ಸುರೇಶ್ ಕಣೆಮರಡ್ಕ, ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಕುಮಾರ್, ಯೋಜನಾಧಿಕಾರಿ ನಾಗೇಶ್ ಪಿ, ನಿರ್ದೇಶಕ ಗಣೇಶ್ ಆಚಾರ್ಯ, ಅಜ್ಜಾವರ ವಲಯ ಮೇಲ್ವಿಚಾರಕಿ ವಿಶಾಲ ಕೆ ಮತ್ತಿತರರು ಜತೆಯಲ್ಲಿದ್ದರು.