ಕನಕಮಜಲು: ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ ಹಿನ್ನೆಲೆ

0

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತ

ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಹಿನ್ನೆಲೆಯಲ್ಲಿ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮಂಗಳೂರಿನಿಂದ ಮೈಸೂರಿಗೆ ಸುಮಾರು 440 ಗ್ಯಾಸ್ ಸಿಲಿಂಡರ್ ಹೊತ್ತು ಸಾಗಿಸುತ್ತಿದ್ದ ಲಾರಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ವ್ಯವಸ್ಥೆಯಿದ್ದು, ಹೆದ್ದಾರಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ಸೇರಿ ರಸ್ತೆ ಸಂಚಾರಕ್ಕೆ ವ್ಯವಸ್ಥೆ ಮಾಡಿ ಕೊಡುತ್ತಿದ್ದಾರೆ.