ನಾಳೆ ಡಿ.9 ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

0

ಕುಕ್ಕೆ ಶ್ರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ನಡೆಯುವ “ಮೂಲಮೃತಿಕಾ”ಪ್ರಸಾದ ತೆಗೆಯುವ ಕಾರ್ಯಕ್ರಮ ಡಿ.9 ರಂದು ನಡೆಯಲಿರುವುದು. ಆದ್ದರಿಂದ ಅಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಬೆಳಗ್ಗಿನಿಂದ ಅಪರಾಹ್ನ ಗಂಟೆ 2.00 ರ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.