ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ

0

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ತಾಲೂಕು ಆಡಳಿತ ಸುಳ್ಯ, ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಮತದಾರರ ನೋಂದಾವಣೆ ಕಾರ್‍ಯಕ್ರಮವು ಡಿ-೭ ರಂದು ಕಾಲೇಜಿನಲ್ಲಿ ನಡೆಯಿತು.


ಈ ಕಾರ್‍ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೆರವೇರಿಸಿದರು. ನಂತರ ಮತ ಚಲಾಯಿಸುವ ಹಕ್ಕಿನ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಸುಳ್ಯ ತಹಶೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯತ್ ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ ಹೆಚ್ ಮೊದಲಾದವರು ಉಪಸ್ಥಿತರಿದ್ದರು. ಐಕ್ಯೂಎಸಿ ವಿಭಾಗದ ಸಂಚಾಲಕಿ ಡಾ ಜಯಶ್ರೀ ಸ್ವಾಗತಿಸಿ ವಂದಿಸಿದರು. ೧೮ ವರ್ಷ ತುಂಬಿದ ವಿದ್ಯಾರ್ಥಿಗಳನ್ನು ಮತದಾನ ಪಟ್ಟಿಗೆ ಸೇರಿಸುವ ನೋಂದಾವಣೆ ಪ್ರಕ್ರಿಯೆಯು ಈ ಸಂದರ್ಭದಲ್ಲಿ ನಡೆಯಿತು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಸಹಕರಿಸಿದರು.