ಸುಬ್ರಹ್ಮಣ್ಯದ ಕುಮಾರಸ್ವಾಮಿ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರಿನ ‘ಇಸ್ರೋ ಬಾಹ್ಯಾಕಾಶ ಕೇಂದ್ರ’ಕ್ಕೆ ಭೇಟಿ

0

ಸುಬ್ರಹ್ಮಣ್ಯದ ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರಿನ ‘ಇಸ್ರೋ ಬಾಹ್ಯಾಕಾಶ ಕೇಂದ್ರ’ಕ್ಕೆ ಇತ್ತೀಚೆಗೆ ಶೈಕ್ಷಣಿಕ ಪ್ರವಾಸ ಕೈಗೊಂಡರು.

ಕಾಲೇಜಿನ ಮುಖ್ಯಸ್ಥರು, ಪ್ರಾಂಶುಪಾಲರು, ಉಪನ್ಯಾಸಕರನ್ನು ಒಳಗೊಂಡ ತಂಡವು ಬೆಂಗಳೂರಿನ ‘ಇಸ್ರೋ ಬಾಹ್ಯಾಕಾಶ ಕೇಂದ್ರ’ಕ್ಕೆ ಶೈಕ್ಷಣಿಕ ಪ್ರವಾಸ ಕೈಗೊಂಡು ಪೀಣ್ಯ ವಿಭಾಗದ ಮುಖ್ಯಸ್ಥರಾದ ಶ್ರೀರಾಮಕೃಷ್ಣ, ಇಸ್ರೋ ಮಂಗಳಯಾನ ಯೋಜನೆಯ ಪ್ರಮುಖರಲ್ಲಿ ಒಬ್ಬರಾದ ನಂದಿನಿ ಹರಿನಾಥ್, ಇನ್ನೋರ್ವ ಪ್ರಮುಖ ವಿಜ್ಞಾನಿ ಶ್ರೀನಾಥ್ ರತ್ನಕುಮಾರ್ ಸೇರಿದಂತೆ ಅನೇಕ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮರ್ಪಕವಾಗಿ ವಿಜ್ಞಾನಿಗಳು ವಿದ್ಯಾರ್ಥಿಗಳೆಲ್ಲರಿಗೂ ಮನಮುಟ್ಟುವಂತೆ ಸೂಕ್ತ ಮಾರ್ಗದರ್ಶನ ನೀಡಿದರು.