ಪಂಜ: ಡಿ.17 ರಿಂದ ಡಿ.25 ತನಕ ಜೇಸಿ ಸಪ್ತಾಹ-2023

0

ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹ -2023 .ಡಿ.17 ರಿಂದ ಡಿ.25 ತನಕ ಜೇಸಿ ಸಪ್ತಾಹ ತನಕ ಜರುಗಲಿದೆ.

ಡಿ.17 ರಂದು ಬೆಳಿಗ್ಗೆ ಗಂಟೆ 8 ರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಪಡ್ಪಿನಂಗಡಿ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಲಿದೆ.
ಜೇಸಿಐ ವಲಯ 15 ಪ್ರಾಂತ್ಯ ಬಿ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ರೈ ಸಪ್ತಾಹ ಉದ್ಘಾಟಿಸಿಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಲೋಕೇಶ್ ಆಕ್ರಿಕಟ್ಟೆ ‌ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ನಾಟೆಕಲ್ ಅಮೆಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಹಾಜಿ ಕಣಚೂರು ಮೋನು, ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಸುರೇಶ್ ಕುಮಾರ್ ನಡ್ಕ ಉಪಸ್ಥಿತರಿರುವರು.



ಡಿ.19 ರಂದು ಬೆಳ್ತಂಗಡಿ ಮೊಗ್ರು ಕಡಮ್ಮಾಜೆ ಫಾರ್ಮ್ಸ್ ಕೃಷಿ ಕ್ಷೇತ್ರ ಭೇಟಿ ನೀಡಿ ವೀಕ್ಷಣೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ಡಿ.21 ರಂದು ಬಾಂಧವ್ಯ ಜೇಸಿ ಕುಟುಂಬ ಸಮ್ಮಿಲನವು ಪಡ್ಪಿನಂಗಡಿ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಲಿದೆ.

ಡಿ.23 ರಂದು ನಿಂತಿಕಲ್ಲು ಕೆ.ಎಸ್.ಗೌಡ ಸಮೂಹ ಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ಆಯ್ದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ನಡೆಯಲಿದೆ.

ಡಿ.24 ರಂದು ಬೆಳಿಗ್ಗೆ ಗಂಟೆ 10 ರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕ್ರೀಡೋತ್ಸವ ಜರುಗಲಿದೆ.550 ಕೆ.ಜಿ. 8 ಜನರ ಲೆವೆಲ್ ಮಾದರಿಯ ಪುರುಷರ ಹಗ್ಗಜಗ್ಗಾಟ ಜೇಸಿ ಟ್ರೋಫಿ -2023
ಪ್ರಥಮ ರೂ.15023 , ದ್ವಿತೀಯ ರೂ.10023, ತೃತೀಯ ಮತ್ತು ಚತುರ್ಥ ತಲಾ ರೂ.3023 ನಗದು ಬಹುಮಾನ ಹಾಗೂ ಜೇಸಿ ಟ್ರೋಫಿ ಇರುತ್ತದೆ.ಕೆಸರು ಗದ್ದೆಯಲ್ಲಿ ಸ್ಥಳೀಯ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಮನೋರಂಜನೆ ಆಟಗಳು, ಆಹ್ವಾನಿತ ತಂಡಗಳ ಕೆಸರು ಗದ್ದೆ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಕ್ರೀಡಾ ಕೂಟವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯೋಗೀಶ್ ಚಿದ್ಗಲ್ ರವರಿಗೆ ಸನ್ಮಾನ ನಡೆಯಲಿದೆ.

ಡಿ.25 ರಂದು ಸಂಜೆ ಗಂಟೆ 6.30ರಿಂದ ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸಹಕಾರಿ ಧುರೀಣ ಜಾಕೆ ಮಾಧವ ಗೌಡ ಪಾಲ್ಗೊಳ್ಳಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ಗುರುಪ್ರಸಾದ್ ತೋಟ ರವರಿಗೆ ಕಮಲ ಪತ್ರ ಪ್ರಶಸ್ತಿ ಪುರಸ್ಕೃರ ನಡೆಯಲಿದ್ದು,ಜೇಸಿಐ ವಲಯ 15 ರ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಪುರಸ್ಕೃರಿಸಲಿದ್ದಾರೆ. ಮುಳಬಾಗಿಲು ಕೂತಾಂಡ್ಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ ಕೆ.ವಿ ರವರು ಸನ್ಮಾನ ಸ್ವೀಕರಿಸಲಿದ್ದಾರೆ.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರು -ಚಿಲಿಂಬಿ ಊರ್ವ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿ ಬಳಗ ದವರಿಂದ ಬೊಳ್ಳಿಮಲೆತ ಶಿವಶಕ್ತಿಲು ಎಂಬ ಪೌರಾಣಿಕ ತುಳು ನಾಟಕ ಪ್ರದರ್ಶನ ಗೊಳ್ಳಲಿದೆ.