ದುಗ್ಗಲಡ್ಕ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನೋತ್ಸವ

0

ದುಗ್ಗಲಡ್ಕದ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನೋತ್ಸವ ಕಾರ್ಯಕ್ರಮ ಇಂದು ನಡೆಯುತಿದೆ. ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹವನ, ದೀಪ ಪ್ರತಿಷ್ಠೆ, ಭಜನೆ .ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6-05ಕ್ಕೆ : ಭಜನಾ ಮಂಗಳೋತ್ಸವ ನಡೆಯಲಿದೆ.

ರಾತ್ರಿ ಗಂಟೆ 7-00ರಿಂದ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾಸಂಘ ದುಗ್ಗಲಡ್ಕ ಇವರಿಂದ ಬಾಲಕೃಷ್ಣ ನಾಯರ್ ನಿರ್ದೇಶನದಲ್ಲಿ
ಶಶಿಪ್ರಭಾ ಪರಿಣಯ, ಪ್ರಮೀಳಾರ್ಜುನ, ಬಬ್ರುವಾಹನ ಯಕ್ಷಗಾನ ಬಯಲಾಟ ನಡೆಯಲಿದೆ.

ಬೆಳಿಗ್ಗೆ ಧ್ವಜಾರೋಹಣವನ್ನು ಕೊಯಿಕುಳಿ ಮಿತ್ರ ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ ನೆರವೇರಿಸಿದರು. ಭಜನಾ ಮಂದಿರದ ಅಧ್ಯಕ್ಷ ದಯಾನಂದ ಸಾಲಿಯಾನ್, ಸಮಿತಿ ಯ ಪ್ರಮುಖರಾದ ಸುಂದರ ರಾವ್, ಯತೀಶ್ ರೈ ದುಗ್ಗಲಡ್ಕ ಮೊದಲಾದವರು ಉಪಸ್ಥಿತರಿದ್ದರು.