ಪಂಜ: ಜೇಸಿ ಸಪ್ತಾಹ-2023 ಉದ್ಘಾಟನೆ

0

ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹ -2023 .ಡಿ.17 ರಂದು ಉದ್ಘಾಟನೆ ಗೊಂಡಿತು.ಡಿ.25 ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಡಿ.17 ರಂದು ಜೇಸಿ ಸಪ್ತಾಹ ಉದ್ಘಾಟನೆ ಹಾಗೂ ಜೇಸಿಐ ಪಂಜ ಪಂಚಶ್ರೀ , ಮಂಗಳೂರು ನಾಟೆಕಲ್ ಅಮೆಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇದರ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಪಡ್ಪಿನಂಗಡಿ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಿತು.
ಜೇಸಿಐ ವಲಯ 15 ಪ್ರಾಂತ್ಯ ಬಿ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ರೈ ಉದ್ಘಾಟಿಸಿ ಮಾತನಾಡಿ “ಜೇಸಿಐ ಪಂಜ ಪಂಚಶ್ರೀ ರಜತ ಸಂಭ್ರಮವನ್ನು ವಿಶೇಷ ಅರ್ಥ ಪೂರ್ಣವಾಗಿ ಅದ್ಧೂರಿಯಿಂದ ಆಚರಿಸಿದೆ. ಸಮಾಜಕ್ಕೆ ನಿರಂತರ ಉತ್ತಮ ಕಾರ್ಯಕ್ರಮಗಳೊಂದಿಗೆ ಕೊಡುಗೆ ನೀಡುತಾ ಬಂದಿರುವ ಕ್ರಿಯಾ ಶೀಲ ಶಿಸ್ತಿನ ಘಟಕ. ಸಪ್ತಾಹ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ರವರು ಮಾತನಾಡಿ “ಪಂಜ ಪರಿಸರದ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲೂ ಜೇಸಿಐ ಪಂಜ ಪಂಚಶ್ರೀ ಯವರು ಭಾಗಿಯಾಗಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಶಿಸ್ತಿನಿಂದ ನಡೆಯುವಲ್ಲಿ ಬಹಳಷ್ಟು ಸಹಕರಿಸುತ್ತಾರೆ. ಅವರು ನೀಡುತ್ತಿರುವ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತದೆ.” ಎಂದು ಹೇಳಿದರು.

ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಲೋಕೇಶ್ ಆಕ್ರಿಕಟ್ಟೆ ‌ಸಭಾಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ನಾಟೆಕಲ್ ಅಮೆಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡಾ.ಶ್ರವಣ್, ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷ ಸುರೇಶ್ ಕುಮಾರ್ ನಡ್ಕ ಹಾಗೂ ಜೇಸಿಐ ಪಂಜ ಪಂಚಶ್ರೀ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ನಿಕಟಪೂರ್ವಾಧ್ಯಕ್ಷ ಶಿವಪ್ರಸಾದ್ ಹಾಲೆಮಜಲು, ಕಾರ್ಯದರ್ಶಿ ವಾಚಣ್ಣ ಕೆರೆಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಾಸುದೇವ ಮೇಲ್ಪಾಡಿ ವೇದಿಕೆಗೆ ಆಹ್ವಾನಿಸಿದರು.ಪ್ರವೀಣ್ ಕುಂಜತ್ತಾಡಿ ಜೇಸಿ ವಾಣಿ ನುಡಿದರು.
ಲೋಕೇಶ್ ಆಕ್ರಿಕಟ್ಟೆ ಸ್ವಾಗತಿಸಿದರು. ದೇವಿಪ್ರಸಾದ್ ಜಾಕೆ ಪ್ರಾಸ್ತಾವಿಕ ಮಾತನಾಡಿದರು.ಆಶ್ವತ್ ಬಾಬ್ಲುಬೆಟ್ಟು, ಅಶೋಕ್, ಪವನ್ ಮೂಲೆಮನೆ ಅತಿಥಿಗಳ ಪರಿಚಯಿಸಿದರು.ವಾಚಣ್ಣ ಕೆರೆಮೂಲೆ ವಂದಿಸಿದರು.

ಡಿ.25 ರ ತನಕ ಸಪ್ತಾಹ:


ಡಿ.19 ರಂದು ಬೆಳ್ತಂಗಡಿ ಮೊಗ್ರು ಕಡಮ್ಮಾಜೆ ಫಾರ್ಮ್ಸ್ ಕೃಷಿ ಕ್ಷೇತ್ರ ಭೇಟಿ ನೀಡಿ ವೀಕ್ಷಣೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ಡಿ.21.ರಂದು ಬಾಂಧವ್ಯ ಜೇಸಿ ಕುಟುಂಬ ಸಮ್ಮಿಲನವು ಪಡ್ಪಿನಂಗಡಿ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಲಿದೆ.

ಡಿ.23.ರಂದು ನಿಂತಿಕಲ್ಲು ಕೆ.ಎಸ್.ಗೌಡ ಸಮೂಹ ಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ಆಯ್ದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ನಡೆಯಲಿದೆ.

ಡಿ.24 ರಂದು ಬೆಳಿಗ್ಗೆ ಗಂಟೆ 10 ರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕ್ರೀಡೋತ್ಸವ ಜರುಗಲಿದೆ.550 ಕೆ.ಜಿ. 8 ಜನರ ಲೆವೆಲ್ ಮಾದರಿಯ ಪುರುಷರ ಹಗ್ಗಜಗ್ಗಾಟ ಜೇಸಿ ಟ್ರೋಫಿ -2023
ಪ್ರಥಮ ರೂ.15023 , ದ್ವಿತೀಯ ರೂ.10023, ತೃತೀಯ ಮತ್ತು ಚತುರ್ಥ ತಲಾ ರೂ.3023 ನಗದು ಬಹುಮಾನ ಹಾಗೂ ಜೇಸಿ ಟ್ರೋಫಿ ಇರುತ್ತದೆ.ಕೆಸರು ಗದ್ದೆಯಲ್ಲಿ ಸ್ಥಳೀಯ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಮನೋರಂಜನೆ ಆಟಗಳು, ಆಹ್ವಾನಿತ ತಂಡಗಳ ಕೆಸರು ಗದ್ದೆ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಕ್ರೀಡಾ ಕೂಟವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯೋಗೀಶ್ ಚಿದ್ಗಲ್ ರವರಿಗೆ ಸನ್ಮಾನ ನಡೆಯಲಿದೆ.

ಡಿ.25 ರಂದು ಸಂಜೆ ಗಂಟೆ 6.30ರಿಂದ ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸಹಕಾರಿ ಧುರೀಣ ಜಾಕೆ ಮಾಧವ ಗೌಡ ಪಾಲ್ಗೊಳ್ಳಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ಗುರುಪ್ರಸಾದ್ ತೋಟ ರವರಿಗೆ ಕಮಲ ಪತ್ರ ಪ್ರಶಸ್ತಿ ಪುರಸ್ಕೃರ ನಡೆಯಲಿದ್ದು,ಜೇಸಿಐ ವಲಯ 15 ರ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಪುರಸ್ಕೃರಿಸಲಿದ್ದಾರೆ. ಮುಳಬಾಗಿಲು ಕೂತಾಂಡ್ಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ ಕೆ.ವಿ ರವರು ಸನ್ಮಾನ ಸ್ವೀಕರಿಸಲಿದ್ದಾರೆ.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರು -ಚಿಲಿಂಬಿ ಊರ್ವ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿ ಬಳಗ ದವರಿಂದ ಬೊಳ್ಳಿಮಲೆತ ಶಿವಶಕ್ತಿಲು ಎಂಬ ಪೌರಾಣಿಕ ತುಳು ನಾಟಕ ಪ್ರದರ್ಶನ ಗೊಳ್ಳಲಿದೆ.