ಬಿಳಿಯಾರು : ವಿದ್ಯುತ್ ಕಂಬಕ್ಕೆ ದ್ವಿಚಕ್ರವಾಹನ ಡಿಕ್ಕಿ, ಸವಾರರಿಬ್ಬರಿಗೆ ಗಂಭೀರ ಗಾಯ

0

ಮಂಗಳೂರು ಆಸ್ಪತ್ರೆಗೆ ದಾಖಲು

ಬಿಳಿಯಾರು ಬಸ್ ಸ್ಟ್ಯಾಂಡ್ ಬಳಿ ಸುಳ್ಯದಿಂದ ಅರಂತೋಡು ಕಡೆಗೆ ಹೋಗುತ್ತಿದ್ದ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಸವಾರರಿಬ್ಬರಿಗೆ ಗಂಭೀರ ಗಾಯವಾದ ಘಟನೆ ಡಿ. 14 ರಂದು ರಾತ್ರಿ ಸಂಭವಿಸಿದೆ.

ಗಾಯಗೊಂಡ ವ್ಯಕ್ತಿಗಳನ್ನು ಕೇರಳ ಕೊಟ್ಟಾಯಂ ಮೂಲದವರು ಎಂದು ತಿಳಿದು ಬಂದಿದ್ದು ಅವರು ಪೆರಾಜೆ ಬಳಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆಯಿಂದ ಆಕಾಶ್ ಎಂಬುವರಿಗೆ ತಲೆ ಮತ್ತು ಹಣೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು,ಹಿಂಬದಿ ಸವಾರ ರಂಜಿತ್ ಎಂಬುವವರ ಕಾಲು ಮತ್ತು ಹೊಟ್ಟೆಯ ಭಾಗಕ್ಕೆ ತೀವ್ರ ತರದ ಜಖಂ ಉಂಟಾಗಿದೆ.
ಸ್ಥಳೀಯರು ಕೂಡಲೇ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿದ್ದು ಪ್ರಥಮ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.