ಬೆಳ್ಳಾರೆ : ಶಿವರಾಮ ಕಾರಂತ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ

0

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.೧೩ ರಂದು ಮಾನವ ಹಕ್ಕುಗಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಕೀಲರಾದ ಪ್ರದೀಪ್ ಬೊಳ್ಳೂರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾನವ ಹಕ್ಕುಗಳ ಪ್ರಾಮುಖ್ಯತೆ, ನಾವು ಸಂವಿಧಾನ ಬದ್ದವಾಗಿ ಪಡೆದಿರುವ ಹಕ್ಕುಗಳು ಮತ್ತು ನಾವು ಯಾವ ರೀತಿಯಲ್ಲಿ ಅವುಗಳನ್ನು ಉಪಯೋಗಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದಾಮೋದರ ಕಣಜಾಲು ಮಾತನಾಡಿ ಮಾನವ ಹಕ್ಕುಗಳು ಬೆಳೆದು ಬಂದ ಇತಿಹಾಸದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಘಟಕದ ಸಂಯೋಜಕ ಮಂಜುನಾಥ ಸಿ. ಉಪಸ್ಥಿತರಿದ್ದರು. ಪುನೀತಾ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಲೋಹಿತಾಕ್ಷಿ ಸ್ವಾಗತಿಸಿ, ಶ್ಯಾಮಲ ಪಿ. ವಂದಿಸಿದರು.