ಪಂಜ:ಮಕ್ಕಳಿಗೆ ಸ್ಪಂದಿಸುವ ಪಂಚಾಯತ್ ಅಭಿಯಾನ ಕಾರ್ಯಕ್ರಮ

0


⬆️ ಏಳು ಶಾಲೆಯ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ಮಕ್ಕಳಿಗೆ ಸ್ಪಂದಿಸುವ ಪಂಚಾಯತ್ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಡಿ.19 ರಂದು ಪಂಜ ಗ್ರಾಮ ಪಂಚಾಯತ್ ನಲ್ಲಿ ಪಂಜ ವಲಯದ ಏಳು ಶಾಲೆಯ ಮಕ್ಕಳಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ರವರು ವಹಿಸಿದ್ದರು.

ಗ್ರಾಮ ಪಂಚಾಯತ್ ಸದಸ್ಯರಾದ ಶರತ್ ಕುದ್ವ,ಜಗದೀಶ್ ಪುರಿಯ, ಶ್ರೀಮತಿ ನೇತ್ರಾವತಿ ಕಲ್ಲಾಜೆ , ಚಂದ್ರಶೇಖರ ದೇರಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ ಯು.ಬಿ, ಕಾರ್ಯದರ್ಶಿ ಗೋಪಾಲಕೃಷ್ಣ,ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ಇದರ ತಾಲೂಕು ಸಂಯೋಜಕಿ ಶ್ರೀಮತಿ ಅಮೃತ, ಶಾಲಾ ಶಿಕ್ಷಕರು ಮಕ್ಕಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಮಕ್ಕಳಿಗೆ ಜಾನಪದ ಗೀತೆ ಭಾಷಣ ಚಿತ್ರಕಲೆ,ಮತ್ತು ಪ್ರಭಂದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬಾಲ ಮಿತ್ರ ರಾಗಿ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಚಿತ್ರಕಲಾ ಬೊಳ್ಳಾಜೆ ರವರನ್ನು ನೇಮಕ ಮಾಡಲಾಯತು. ತೀರ್ಪುಗಾರರಾಗಿ
ಶ್ರೀಮತಿ ರಮ್ಯಾ ದಿಲೀಪ್ ಬಾಬ್ಲುಬೆಟ್ಟು ಮತ್ತು ಶ್ರೀಮತಿ ಲತಾ ಮುಡೂರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ ಯು.ಬಿ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಚಿತ್ರಕಲಾ ಬೊಳ್ಳಾಜೆ ನಿರೂಪಿಸಿದರು.ಚೈಲ್ಡ್ ರೈಟ್ಸ್ ಟ್ರಸ್ಟ್ ತಾಲೂಕು ಸಂಯೋಜಕಿ ಶ್ರೀಮತಿ ಅಮೃತ ವಂದಿಸಿದರು.